ಮಂಗಳೂರು; ರಾಜಕಾಲುವೆಗೆ ಉರುಳಿದ ಆಟೋ: ಚಾಲಕ ಮೃತ್ಯು



ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಆಟೋ ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಕೊಟ್ಟಾರ ಅಬ್ಬಕ್ಕ ನಗರದಲ್ಲಿ ನಡೆದಿದೆ.

ದೀಪಕ್ (40) ಮೃತ ಆಟೋ ಚಾಲಕ.

ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×