ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ “ಸಂಸದ” ರಾಗುವುದು ಖಚಿತ?

 


ಬಿಜೆಪಿಯೊಂದಿಗಿನ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಪ್ರತಿಷ್ಠಿತ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಬಿಜೆಪಿಯ ಜನ ವಿರೋಧಿ ನೀತಿಗಳ ವಿರುದ್ಧ ಅಂದೋಲನ ಸಂಘಟಿಸಿದ್ದ ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ ತಿರುವಳ್ಳುವರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಇದೀಗ ಅವರು ಗೆಲುವು ಬಹುತೇಕ ನಿಶ್ಚಿತವಾಗಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಡಿಎಮ್’ಕೆ-ಕಾಂಗ್ರೇಸ್ ಮೈತ್ರಿ ಅಭ್ಯರ್ಥಿಯಾಗಿರುವ ಅವರು ಅವರ ಸ್ಪರ್ಧೆ “ಸಿದ್ಧಾಂತಗಳ ನಡುವಿನ ಘರ್ಷಣೆ” ಎಂದು ಉಲ್ಲೇಖಿಸಿದ್ದರು. ಇದೀಗ ಅವರು ದೊಡ್ಡ ಅಂತರದಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದ್ದು ಇನ್ನು ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ‌

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×