ಉಳ್ಳಾಲ ತಾಲೂಕಿನ ವಿವಿಧ ಕಡೆ ವ್ಯಾಪಕ ಮಳೆಯಿಂದ ಪ್ರಾಕೃತಿಕ ವಿಕೋಪ ಸಂಭವಿಸಿ ಜೀವ ಹಾನಿ,ಸ್ಥಳಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು ಟಿ ಖಾದರ್

 


ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ವ್ಯಾಪಕ ಮಳೆಯಿಂದಾಗಿ ಪ್ರಾಕೃತಿಕ ವಿಕೋಪ ಸಂಭವಿಸಿ ಮುನ್ನೂರು ಗ್ರಾಮದ *ಕುತ್ತಾರು ಮದನಿ ನಗರದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು* ಸ್ಥಳಕ್ಕೆ ಸ್ಥಳೀಯ ಶಾಸಕ *ಸಭಾಧ್ಯಕ್ಷ ಯು ಟಿ ಖಾದರ್* ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಗೆ ಭೇಟಿ ನೀಡಿದ ಸಭಾಧ್ಯಕ್ಷರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.ನಂತರ ಪ್ರಾಕೃತಿಕ ವಿಕೋಪ ಸಂಭವಿಸಿದ ಕ್ಷೇತ್ರದ *ಮಂಜನಾಡಿ ಗ್ರಾಮದ ಕಲ್ಕಟ್ಟ,ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಚ್ಚಿಲ* ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಸಭಾಧ್ಯಕ್ಷರು *ಇಂದು ಕರೆದಿದ್ದ ಎಲ್ಲಾ ಸಭೆಗಳನ್ನು ರದ್ದು ಮಾಡಿ,* ಅಧಿಕಾರಿಗಳು ಆಯಾ ಗ್ರಾಮ ಪಂಚಾಯತ್,ಪಟ್ಟಣ ಪಂಚಾಯತ್,ಪುರಸಭೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಘಟನೆಗಳ ಕುರಿತಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. 










ನವೀನ ಹಳೆಯದು
WhatsApp Join our 'Shan Media News' WhatsApp group - Join Now ×