ಶಿರೂರು ಗುಡ್ಡ ಕುಸಿತ ದುರಂತ | ಒಂದು ಟ್ರಕ್ ನೀರಿನಲ್ಲಿ ಮುಳುಗಿರುವುದು ಖಚಿತವಾಗಿದೆ; ಸಚಿವ ಕೃಷ್ಣಬೈರೇಗೌಡ

 


ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು 9ನೇ ದಿನವೂ ಮುಂದುವರಿಸಲಾಗಿದೆ.

ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದೆ” ಎಂಬುದನ್ನು ದೃಢೀಕರಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “ಒಂದು ಟ್ರಕ್ ನೀರಿನಲ್ಲಿ ಮುಳುಗಿದೆ ಎಂಬುದು ಖಚಿತವಾಗಿದ್ದು, ನೌಕಾಪಡೆಯ ಡೀಪ್ ಡೈವರ್‌ಗಳು ಶೀಘ್ರದಲ್ಲೇ ಲಂಗರು ಹಾಕಲು ಪ್ರಯತ್ನಿಸುತ್ತಾರೆ. ಟ್ರಕ್‌ ಅನ್ನು ನದಿಯಿಂದ ಮೇಲೆತ್ತಲು ಲಾಂಗ್ ಆರ್ಮ್ ಬೂಮರ್ ಅಗೆಯುವ ಯಂತ್ರವನ್ನು ಬಳಸಲಾಗುವುದು” ಎಂದು ತಿಳಿಸಿದ್ದಾರೆ.

ನವೀನ ಹಳೆಯದು
WhatsApp Join our 'Shan Media News' WhatsApp group - Join Now ×