ಗಾಳಿ ಮಳೆಗೆ ಚೊಕ್ಕಬೆಟ್ಟು ಪ್ರದೇಶದಲ್ಲಿ ಸುಮಾರು ಮನೆಗೆ ಹಾನಿ !!

 


ಮಂಗಳೂರು: ಶುಕ್ರವಾರ ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ.

ಶಾಲೆ, ಮನೆಯ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬ ಧರಾಶಾಹಿಯಾಗಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ.

ಕೃಷ್ಣಪುರ ಕಾರುಣ್ಯ ವಿದ್ಯಾಲಯದ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಬಡವಣೆಗೆ ಸಂಪರ್ಕವಿರುವ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ವಿದ್ಯುತ್ ತಂತಿಗಳು ತುಂಡಾಗಿವೆ. ಪಕ್ಕದ ಮನೆಯ ಶೀಟ್ ಹಾರಿ ಬಂದು ಇನ್ನೊಂದು ಮನೆಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಭಾರೀ ಗಾಳಿ ಬೀಸಿದ ಪರಿಣಾಮ ಮನೆಯ ಹಂಚು ಹಾರಿ ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಂತಹ ಘಟನೆ ನಡೆದಿಲ್ಲ.







ನವೀನ ಹಳೆಯದು
WhatsApp Join our 'Shan Media News' WhatsApp group - Join Now ×