ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ
ಪ್ರೀತಿಯ ಆಮಂತ್ರಣ
ಮಾನ್ಯರೇ
ದಿನಾಂಕ :- 11.04.2025 ಶುಕ್ರವಾರ ಅಪರಾಹ್ನ 3:30 ಗಂಟೆಗೆ ಸರಿಯಾಗಿ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಗಳ ಉದ್ಘಾಟನೆ ಮತ್ತು ನೂತನ ಕಿಡ್ನಿ ಡಯಾಲಿಸಿಸ್ ಘಟಕ ಹಾಗೂ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ಕಾಮಗಾರಿ ಶಂಕು ಸ್ಥಾಪನೆ ಕಾರ್ಯಕ್ರಮವು ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ನಮ್ಮ ನೆಚ್ಚಿನ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷರಾದ ಯುಟಿ ಖಾದರ್ ರವರು ಉಪಸ್ಥಿತರಿರುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಆರೋಗ್ಯ ಸಚಿವರಾದ ಶ್ರೀಯುತ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ, ಆದುದರಿಂದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲ ನಾಯಕರು, ಕಾರ್ಯಕರ್ತರುಗಳು, ಪಕ್ಷದ ಅಭಿಮಾನಿಗಳು ಹಿತೈಷಿಗಳು ಶುಕ್ರವಾರವಾರ ಸಾಯಂಕಾಲ ದಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗ ವಹಿಸಿ ಯಶಸ್ವಿಗೊಳಿಸಬೇಕಾಗಿ ಈ ಮೂಲಕ ವಿನಂತಿ
-------------------------------------
ಪ್ರಕಟಣೆ
ಶ್ರೀ ರಮೇಶ್ ಶೆಟ್ಟಿ ಬೋಳಿಯಾರ್, ಅಧ್ಯಕ್ಷರು
ಎಕೆ ಅಬ್ದುಲ್ ರಹಿಮಾನ್ ಕೋಡಿಜಾಲ್ ಪ್ರಧಾನ ಕಾರ್ಯದರ್ಶಿ
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ
